ಇದೇ ವೇಳೆ ಇಂದಿರಾ ಗಾಂಧಿ ಜಾರಿಗೊಳಿಸಿದ್ದ ಪರಿಸ್ಥಿತಿ ಭಾರತದ `ಕರಾಳ ದಿನಗಳು' ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಹೊಸಕಿಹಾಕಿತು ಎಂದು ಟೀಕಿಸಿದ್ದಾರೆ. ಅಧಿಕಾರಕ್ಕಾಗಿ ಇಡೀ ದೇಶವನ್ನು ಬಂಧನದಲ್ಲಿಡಲಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ. ತುರ್ತು ಪರಿಸ್ಥಿತಿ ಹಲವು ಘಟನೆಗಳನ್ನು ಸ್ಮರಣೆಗೆ ತರಲಿದ್ದು ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯಿಂದ ಯುವಕರು ಸಾಕಷ್ಟು ಕಲಿತರು. ಪ್ರಜಾಪ್ರಭುತ್ವವನ್ನು ಮರಳಿ ಸ್ಥಾಪಿಸಬೇಕೆಂಬ ಒಂದೇ ಗುರಿಯೊಂದಿಗೆ ಹಲವಾರು ಮುಖಂಡರು, ಸಂಘಟನೆಗಳು, ರಾಜಕೀಯ ಪಕ್ಷಗಳು ಜೊತೆ ಕೆಲಸ ಮಾಡಿದರು ಎಂದಿದ್ದಾರೆ.