ಪಣಜಿ: ಕೇಂದ್ರದ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಗೋವಾ ನಿವಾಸದಲ್ಲಿ ಮನೆಗೆಲಸಕ್ಕಿದ್ದ ಕರ್ನಾಟಕ ಮೂಲದ ಮಹಿಳೆಯೊಬ್ಬರು ಹತ್ಯೆಗೀಡಾಗಿದ್ದಾರೆ. ಬಾಗಲಕೋಟೆಯ ಚಾರು ರಾಥೋಡ್ ಮೃತ ಮಹಿಳೆ.
ವಿಧವೆಯಾಗಿರುವ ಚಾರು ಅವರು ಇಪ್ಪತ್ತು ವರ್ಷದಿಂದ ಗೋವಾದಲ್ಲೇ ಇದ್ದರು. ಭಾನುವಾರ ರಾತ್ರಿ ಅವರು ಮನೆಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರ ಮೈಮೇಲೆ ಇದ್ದ ಆಭರಣ ಹಾಗೂ ಮೊಬೈಲ್ ಫೋನ್ ನಾಪತ್ತೆಯಾಗಿದೆ. ಕೊಲೆಯ ಹಿಂದೆ ರಾಮಣ್ಣ ಎನ್ನುವ ವ್ಯಕ್ತಿ ಕೈವಾಡ ಇರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Advertisement