ಫೆ.11ರಂದು ರಾಜ್ಯಾದ್ಯಂತ ಇರುವ ಜಿಲ್ಲಾ ಪರಿಷತ್ ಶಾಲೆಗಳಿಗೆ 62,105 ಅಗ್ನಿಶಾಮಕಗಳ ಖರೀದಿಸುವಂತೆ ಶಿಕ್ಷಣ ನಿರ್ದೇಶಕರಿಗೆ ಹಣಕಾಸು ಇಲಾಖೆ ಆದೇಶಿಸಿತ್ತು. ಆದರೆ, ಇ-ಟೆಂಡರ್ ಕರೆಯದೇ ಗುತ್ತಿಗೆ ನೀಡಲಾಗಿತ್ತು. ಆ ಗುತ್ತಿಗೆಗೆ ಸಚಿವ ತಾವ್ಡೆ ಅಂಕಿತ ಹಾಕಿದ್ದರೂ, ಹಣಕಾಸು ಇಲಾಖೆ ಆಕ್ಷೇಪವೆತ್ತಿದ ಕಾರಣ ಅದು ಸ್ಥಗಿತಗೊಂಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ತಾವ್ಡೆ, ``ಗುತ್ತಿಗೆದಾರರಿಗೆ ಒಂದೇ ಒಂದು ರುಪಾಯಿಯನ್ನೂ ನೀಡಿಲ್ಲ. ಹಣಕಾಸು ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದ ತಕ್ಷಣವೇ ಆದೇಶಕ್ಕೆ ತಡೆ ತಂದಿದ್ದೇವೆ'' ಎಂದಿದ್ದಾರೆ.