ಬೆಂಗಳೂರು: ಸಕ್ಕರೆ ಕಾಯಿಲೆ ಮತ್ತು ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು 10 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ನಮ್ಮ ಬೆಂಗಳೂರಿಗೆ ಬರುತ್ತಿದ್ದಾರೆ.
ಮಾರ್ಚ್ 5ರಂದು ಬೆಂಗಳೂರಿಗೆ ಬರುವ ಕೇಜ್ರಿವಾಲ್, ಇಲ್ಲಿ ಸುಮಾರು 10 ದಿನಗಳ ಕಾಲ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. ಇತ್ತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಮ್ಮಿಗೆ ಬೆಂಗಳೂರಿನಲ್ಲಿ ಯೋಗ ಚಿಕಿತ್ಸೆ ಪಡೆದುಕೊಳ್ಳುವಂತೆ ಕೇಜ್ರಿವಾಲ್ಗೆ ಸಲಹೆ ನೀಡಿದ್ದರು.
ಕೇಜ್ರಿವಾಲ್ ಅನುಪಸ್ಥಿತಿಯಲ್ಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ದೆಹಲಿ ಸರ್ಕಾರದ ದೈನಂದಿನ ಕಾರ್ಯಗಳನ್ನು ನೋಡಿಕೊಳ್ಳಲಿದ್ದಾರೆ.
Advertisement