ಬಿಹಾರ ಮಾಜಿ ಸಿಎಂ, ರಾಮ್‌ಸುಂದರ್ ದಾಸ್ ನಿಧನ

ರಾಮ್‌ಸುಂದರ್ ದಾಸ್
ರಾಮ್‌ಸುಂದರ್ ದಾಸ್
Updated on

ಪಾಟ್ನಾ: ಜೆಡಿಯು ಹಿರಿಯ ನಾಯಕ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ರಾಮ್‌ಸುಂದರ್ ದಾಸ್ ಅವರು ಶುಕ್ರವಾರ ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ದಾಸ್ ಅವರು ಎರಡು ದಿನಗಳ ಹಿಂದಷ್ಟೇ ಪಾಟ್ನಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ದಾಸ್ ಅವರು ಇಬ್ಬರು ಪುತ್ರರನ್ನು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 1979ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ದಾಸ್, 2009ರ ಲೋಕಸಭೆ ಚುನಾವಣೆಯಲ್ಲಿ ರಾಮ್ ವಿಲಾಸ್ ಪಾಸ್ವಾನ್ ವಿರುದ್ಧ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.

ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದಾಸ್ ಅವರ ನಿವಾಸಕ್ಕೆ ಧಾವಿಸಿದ್ದು, ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಹೋಳಿ ಆಚರಣೆಯನ್ನು ರದ್ದುಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com