ಅತ್ಯಾಚಾರ ನಡೆದು 3 ದಿನ ಕಳೆದರೂ ಆರೋಪಿಗಳ ಬಂಧನವಿಲ್ಲ

ರಾಣಾಘಾಟ್: 71 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ದೇಶಾದಾದ್ಯಂತ ತಲ್ಲಣ ಉಂಟು ಮಾಡಿದ್ದು...
ಘಟನೆ ಖಂಡಿಸಿ ಥಳೀಯ ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ
ಘಟನೆ ಖಂಡಿಸಿ ಥಳೀಯ ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ

ರಾಣಾಘಾಟ್: ರಾಣಾಘಾಟ್: 71 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ದೇಶಾದಾದ್ಯಂತ ತಲ್ಲಣ ಉಂಟು ಮಾಡಿದ್ದು, ಅತ್ಯಾಚಾರ ನಡೆದು 3 ದಿನಗಳ ಕಳೆದರೂ ಪೊಲೀಸರಿಂದ ಕಾಮುಕರ ಬಂಧನ ಸಾಧ್ಯವಾಗಿಲ್ಲ.

ನಾಡಿಯಾ ಜಿಲ್ಲೆಯ ಗಂಗ್ನಾಪುರದಲ್ಲಿರುವ ಕಾನ್ವೆಂಟ್ ಗೆ ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಒಳ ನುಗ್ಗಿದ ರೌಡಿಗಳು ಹಣ ದೋಚಲು ಮುಂದಾಗಿದ್ದಾರೆ. ಈ ವೇಳೆ ರೌಡಿಗಳನ್ನು ಕಂಡ ಸನ್ಯಾಸಿನಿ ಹಣದೋಚಲು ಬಿಡದೆ ತಡೆವೊಡ್ಡಿದ್ದಾರೆ. ಸನ್ಯಾಸಿನಿಯ ವರ್ತನಿಯಿಂದ ತೀರ್ವ ಕೆಂಡಾಮಂಡಲವಾದ ರೌಡಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ನಂತರ ಸ್ಥಳದಲ್ಲಿ ಅಲ್ಮೆರಾದಲ್ಲಿದ್ದ 12 ಲಕ್ಷವನ್ನು ದೋಚಿ ಸ್ಥಳದಿಂದ ಕಾಲ್ಕಿತ್ತಿದ್ದರು.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣದಲ್ಲಿ 4 ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ ಘಟನೆ ನಡೆದು ಮೂರು ದಿನಗಳು ಕಳೆದಿದ್ದರು ಈವರೆಗೂ ಆರೋಪಿಗಳ ಸುಳಿವು ಸಿಕ್ಕಿಲ್ಲವಾದ್ದರಿಂದ ಆರೋಪಿಗಳ ಹಿಡಿದುಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸನ್ಯಾಸಿನಿಯ ಆರೋಗ್ಯದಲ್ಲಿ ಈಗಾಗಲೇ ಚೇತರಿಕೆ ಕಂಡು ಬಂದಿದ್ದು, ನೀರು ಮತ್ತು ದ್ರವ ಆಹಾರ ಸೇವಿಸುತ್ತಿದ್ದಾರೆ ಎಂದು ರಾಣಾಘಾಟ್ ನ ಆಸ್ಪತ್ರೆಯ ವರಿಷ್ಠ ಎ.ಕೆ. ಮಂಡೋಲ್ ಹೇಳಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸ್ಥಳೀಯ ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳು ಆರೋಪಿಗಳನ್ನು ಬಂಧಿಸುವಂತೆ ಕಾನ್ವೆಂಟ್ ನ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com