ಘಟನೆ ಖಂಡಿಸಿ ಥಳೀಯ ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ
ಘಟನೆ ಖಂಡಿಸಿ ಥಳೀಯ ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ

ಅತ್ಯಾಚಾರ ನಡೆದು 3 ದಿನ ಕಳೆದರೂ ಆರೋಪಿಗಳ ಬಂಧನವಿಲ್ಲ

ರಾಣಾಘಾಟ್: 71 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ದೇಶಾದಾದ್ಯಂತ ತಲ್ಲಣ ಉಂಟು ಮಾಡಿದ್ದು...
Published on

ರಾಣಾಘಾಟ್: ರಾಣಾಘಾಟ್: 71 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ದೇಶಾದಾದ್ಯಂತ ತಲ್ಲಣ ಉಂಟು ಮಾಡಿದ್ದು, ಅತ್ಯಾಚಾರ ನಡೆದು 3 ದಿನಗಳ ಕಳೆದರೂ ಪೊಲೀಸರಿಂದ ಕಾಮುಕರ ಬಂಧನ ಸಾಧ್ಯವಾಗಿಲ್ಲ.

ನಾಡಿಯಾ ಜಿಲ್ಲೆಯ ಗಂಗ್ನಾಪುರದಲ್ಲಿರುವ ಕಾನ್ವೆಂಟ್ ಗೆ ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಒಳ ನುಗ್ಗಿದ ರೌಡಿಗಳು ಹಣ ದೋಚಲು ಮುಂದಾಗಿದ್ದಾರೆ. ಈ ವೇಳೆ ರೌಡಿಗಳನ್ನು ಕಂಡ ಸನ್ಯಾಸಿನಿ ಹಣದೋಚಲು ಬಿಡದೆ ತಡೆವೊಡ್ಡಿದ್ದಾರೆ. ಸನ್ಯಾಸಿನಿಯ ವರ್ತನಿಯಿಂದ ತೀರ್ವ ಕೆಂಡಾಮಂಡಲವಾದ ರೌಡಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ನಂತರ ಸ್ಥಳದಲ್ಲಿ ಅಲ್ಮೆರಾದಲ್ಲಿದ್ದ 12 ಲಕ್ಷವನ್ನು ದೋಚಿ ಸ್ಥಳದಿಂದ ಕಾಲ್ಕಿತ್ತಿದ್ದರು.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣದಲ್ಲಿ 4 ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ ಘಟನೆ ನಡೆದು ಮೂರು ದಿನಗಳು ಕಳೆದಿದ್ದರು ಈವರೆಗೂ ಆರೋಪಿಗಳ ಸುಳಿವು ಸಿಕ್ಕಿಲ್ಲವಾದ್ದರಿಂದ ಆರೋಪಿಗಳ ಹಿಡಿದುಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸನ್ಯಾಸಿನಿಯ ಆರೋಗ್ಯದಲ್ಲಿ ಈಗಾಗಲೇ ಚೇತರಿಕೆ ಕಂಡು ಬಂದಿದ್ದು, ನೀರು ಮತ್ತು ದ್ರವ ಆಹಾರ ಸೇವಿಸುತ್ತಿದ್ದಾರೆ ಎಂದು ರಾಣಾಘಾಟ್ ನ ಆಸ್ಪತ್ರೆಯ ವರಿಷ್ಠ ಎ.ಕೆ. ಮಂಡೋಲ್ ಹೇಳಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸ್ಥಳೀಯ ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳು ಆರೋಪಿಗಳನ್ನು ಬಂಧಿಸುವಂತೆ ಕಾನ್ವೆಂಟ್ ನ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com