ನವದೆಹಲಿ: ಆಂತರಿಕ ಭಿನ್ನಾಭಿಪ್ರಾಯದಿಂದ ಬಳಲುತ್ತಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮುಂದಿನ ವಾರ ನಡೆಯಲಿದ್ದು, ಈ ಸಭೆಗೆ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗೈರು ಆಗುವ ಸಾಧ್ಯತೆ ಇದೆ.
ಇದೇ ಮಾರ್ಚ್ 28ರಂದು ಪಕ್ಷದ ರಾಷ್ಟ್ರೀಯ ಸಮಿತಿ ಸಭೆ ನಿಗದಿಯಾಗಿದ್ದು, ಈ ಸಭೆಯ ಅಜೆಂಡ ಅಂತಿಮಗೊಳಿಸಲು ಕಾರ್ಯಕಾರಣಿ ಸಭೆ ಕರೆಯಲಾಗಿದೆ.
ಅರವಿಂದ್ ಕೇಜ್ರಿವಾಲ್, ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದ್ ಸೇರಿದಂತೆ ಪ್ರಮುಖ 21 ನಾಯಕರನ್ನೊಳಗೊಂಡ ಕಾರ್ಯಕಾರಣಿ ಸಭೆ ಈ ವಾರದ ಮಧ್ಯದಲ್ಲಿ ನಡೆಯುವ ಸಾಧ್ಯತೆ ಇದೆ. ಆದರೆ ಈ ಸಭೆಗೆ ಕೇಜ್ರಿವಾಲ್ ಅವರು ಹಾಜರಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಶಮನ ಮಾಡಲು ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ರಾಜಿ ಪ್ರಯತ್ನಗಳು ಯಶಸ್ವಿಯಾದರೆ ಮಾತ್ರ ಕಾರ್ಯಕಾರಣಿ ಸಭೆ ಸುಗಮವಾಗಿ ನಡೆಯಲಿದೆ.
Advertisement