ಕಾಶ್ಮೀರ ಸಮಸ್ಯೆ ಬಂದೂಕಿನಿಂದ ಪರಿಹಾರವಾಗಲ್ಲ: ಒಮರ್ ಅಬ್ದುಲ್ಲಾ

ಬಂದೂಕಿನಿಂದ ಕಾಶ್ಮೀರ ವಿವಾದ ಬಗೆಹರಿಯಲ್ಲ ಎಂದು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ...
ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ
Updated on

ಜಮ್ಮು-ಕಾಶ್ಮೀರ: ಬಂದೂಕಿನಿಂದ ಕಾಶ್ಮೀರ ವಿವಾದ ಬಗೆಹರಿಯಲ್ಲ ಎಂದು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.

ಕಾಶ್ಮೀರ ವಿವಾದವನ್ನು ಬಂದೂಕು ಹಿಡಿದು ಬಗೆಹರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ನಡೆದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಮಾತುಕತೆಯಿಂದ ಬಗೆಹರಿಸಬೇಕು ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆರು ವರ್ಷಗಳಿಂದ ಮಾತುಕತೆಯಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳೋನ ಎಂದು ನಾನು ಹೇಳುತ್ತಾ ಬಂದಿದ್ದೇನೆ. ಅದೇ ಹೇಳಿಕೆಯನ್ನಾ ಈಗ ಪಿಡಿಪಿ ನೀಡುತ್ತಿದೆ. ಆದರೆ, ಈ ಹೇಳಿಕೆಗಳು ಹೊಸದೇನು ಅಲ್ಲ ಎಂದಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನಾಚರಣೆಗಳಲ್ಲಿ ನನ್ನ ಭಾಷಣದಲ್ಲಿ ಈ ವಿವಾದವನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಲೋನ ಎಂದು ಹೇಳುತ್ತಾ ಬಂದಿದ್ದೇನೆ. ಈಗಲೂ ಹೇಳುತ್ತೇನೆ, ಬಂದೂಕು ಹಿಡಿದು ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದರೆ, ಅದರಿಂದ ಪರಿಹಾರ ಸಿಗುವುದಿಲ್ಲ ಎಂದು ಒಮರ್ ನುಡಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com