ಢಾಕಾದಲ್ಲಿ ಕಾಲ್ತುಳಿತ: 10 ಯಾತ್ರಾರ್ಥಿಗಳ ಸಾವು

ಇಲ್ಲಿನ ಪುರಾತನ ಬ್ರಹ್ಮಪುತ್ರಾ ನದಿಯ ತಟದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅಷ್ಟಮಿ ಸ್ನಾನದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ...
ಢಾಕಾದಲ್ಲಿ ಕಾಲ್ತುಳಿತ
ಢಾಕಾದಲ್ಲಿ ಕಾಲ್ತುಳಿತ
Updated on

ಢಾಕಾ: ಇಲ್ಲಿನ ಪುರಾತನ ಬ್ರಹ್ಮಪುತ್ರಾ ನದಿಯ ತಟದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅಷ್ಟಮಿ ಸ್ನಾನದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 10 ಹಿಂದೂ ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ. ಸಾವಿಗೀಡಾದವರಲ್ಲಿ 7 ಮಂದಿ ಮಹಿಳೆಯರಾಗಿದ್ದಾರೆ. 50 ಮಂದಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರಾಯಣಗಂಜ್‌ನಲ್ಲಿ ಬೆಳಗ್ಗೆ 5.48ರ ವೇಳೆ ಅಷ್ಟಮಿ ಸ್ನಾನ ಮಾಡಲು ಸಾವಿರಾರು ಭಕ್ತರು ಜಮಾಯಿಸಿದ್ದರು. ಪುಣ್ಯ ಸ್ನಾನ ಮಾಡಲು ಭಕ್ತರಿಗೆ ಸಹಾಯವಾಗಲೆಂದು  16 ಕಟ್ಟೆಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ಕಟ್ಟೆಗಳತ್ತ ಹೋಗಲು ಜನರು ನೂಕು ನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಬೆಳಗ್ಗೆ 9.15 ರಿಂದ 10 ಗಂಟೆಯ ವೇಳೆಗೆ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 50 ರಿಂದ ಮೇಲ್ಪಟ್ಟವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com