ಏಪ್ರಿಲ್ 1ಕ್ಕೆ ಮನಮೋಹನ್ ಸಿಂಗ್ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ದಾಖಲಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅರ್ಜಿಯನ್ನು...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವುದನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ದಾಖಲಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅರ್ಜಿಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 1 ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅಧಿಕಾರಿಯೊಬ್ಬರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಿಸಿರುವ ಅರ್ಜಿಯನ್ನು ವಿಚಾರಣೆಯ ಅರ್ಜಿಗಳೊಂದಿಗೆ ಈಗಾಗಲೇ ಸೇರಿಸಲಾಗಿದ್ದು. ಏಪ್ರಿಲ್ 1 ರಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಉದ್ಯಮಿ ಕುಮಾರ ಮಂಗಲಂ, ಪಿ.ಸಿ.ಪಾರಕ್ ಸೇರಿ 6 ಜನರಿಗೆ ಹಾಗೂ ಹಿಂಡಾಲ್ಕೋ ಸಂಸ್ಥೆಗೆ ಸೇರಿದ 8 ಕಂಪನಿಗಳಿಗೆ ಮಾ.11 ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಮನಮೋಹನ್ ಸಿಂಗ್ ಅವರನ್ನು ಹಲವು ಬಾರಿ ವಿಚಾರಣೆಗೊಳಪಡಿಸಿತ್ತು.

ಸಿಬಿಐ ಜಾರಿ ಮಾಡಿದ ಸಮನ್ಸ್ ಕುರಿತಂತೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ಸಿಬಿಐ ಜಾರಿ ಮಾಡಿರುವ ಸಮನ್ಸ್ ಕಾನೂನು ಬದ್ಧವಾಗಿಲ್ಲ. ಸಿಬಿಐ ಅಧಿಕಾರಿಗಳು ಕಾನೂನು ರೀತಿಯ ನಿಯಮಗಳನ್ನು ಪಾಲಿಸಿಲ್ಲ. ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಅಪರಾಧ ವಿಭಾಗದಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಸಮನ್ಸ್ ಜಾರಿ ಮಾಡಿರುವ ಸಿಬಿಐ ಕ್ರಮ ಸರಿಯಲ್ಲ. ಸಿಬಿಐ ಅವರು ಜಾರಿ ಮಾಡಿರುವ ಸಮನ್ಸ್ ನ್ನು ರದ್ದು ಮಾಡುವಂತೆ ಕೋರಿ ಮನಮೋಹನ್ ಸಿಂಗ್ ಅವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com