ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಚಿಂತನೆ

ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್‌ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ...
ರಾಜ್‌ನಾಥ್ ಸಿಂಗ್
ರಾಜ್‌ನಾಥ್ ಸಿಂಗ್
Updated on

ಇಂದೋರ್:  ದೇಶಾದ್ಯಂತ ಗೋಹತ್ಯೆ ನಿಷೇಧ ಕಾನೂನು ತರಲು ಎನ್‌ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.

ನಮ್ಮ ದೇಶದಲ್ಲಿ ಗೋಹತ್ಯೆ ಮಾಡುವಂತಿಲ್ಲ. ಗೋಹತ್ಯೆ ನಿಷೇಧಕ್ಕಾಗಿ ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಗಣತಿಯನ್ನು ಮಾಡಲು ಉದ್ದೇಶಿಸಿದ್ದೇವೆ ಎಂದು ಸಿಂಗ್ ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿದೆ. ಹೀಗಿರುವಾಗ ಯಾರೊಬ್ಬರೂ ಗೋಹತ್ಯೆ ನಿಷೇಧ ಕಾನೂನಿನಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಭಾವಿಸುವುದು ಬೇಡ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com