ಕೋಲ್ಕತಾ: ಕಳೆದ ವರ್ಷ ಪಶ್ಚಿಮ ಬಂಗಾಳದ ಬರ್ದ್ವಾನ್ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದ ಬಾಂಬ್ ಸ್ಫೋಟದ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ(ಎನ್ ಐಎ), 21 ಮಂದಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಆರೋಪಪಟ್ಟಿಯನ್ನು ಸಲ್ಲಿಸಿದೆ.
ಭಯೋತ್ಪಾದನಾ ಚಟುವಟಿಕೆಗಳು, ಪಿತೂರಿ, ಭಯೋತ್ಪಾದನೆ ಶಿಬಿರಗಳನ್ನು ನಡೆಸಿರುವುದು, ಅಕ್ರಮವಾಗಿ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ಹೊಂದಿದ್ದ ಆರೋಪಗಳನ್ನು ದಾಖಲಿಸಲಾಗಿದೆ.
ವಿದೇಶಿ ಕಾಯ್ದೆ ಮತ್ತು ಪಾಸ್ ಪೋರ್ಟ್ ಕಾಯ್ದೆಗೆ ಸಂಬಂಧಿಸಿದಂತೆ ಪೋರ್ಜರಿ ಮಾಡಿರುವ ಆರೋಪಗಳು ಅವರ ಮೇಲಿದೆ.
Advertisement