ನವದೆಹಲಿ: ನೇತಾಜಿ ಸುಭಾಶ್ಚಂದ್ರ ಬೋಸ್ ಅವರ ಕುಟುಂಬ ಸದಸ್ಯರ ಮೇಲೆ 20 ವರ್ಷಗಳ ಕಾಲ ನಡೆದಿದೆಯೆನ್ನಲಾದ ಬೇಹುಗಾರಿಕೆ ಬಗ್ಗೆ ಯಾವುದೇ ತನಿಖೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವ ಹರಿಭಾಯ್ ಚೌಧರಿ, ಬೇಹುಗಾರಿಕೆ ಬಗ್ಗೆ ತನಿಖೆ ನಡೆಸುವ ಯeವ ಪ್ರಸ್ತಾಪವೂ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನೇತಾಜಿ ಸಾವಿನ ರಹಸ್ಯ ನಿಗೂಢವಾಗಿಯೇ ಉಳಿಯುವಂತಾಗಿದೆ.
Advertisement