ವ್ಯಾಪಂ ಹಗರಣ: 8ನೇ ಆರೋಪಿಯ ನಿಗೂಢ ಸಾವು

ವ್ಯಾಪಂ ಹಗರಣದ 8ನೇ ಆರೋಪಿ ವಿಜಯ್ ಸಿಂಗ್ ಶವವಾಗಿ ಪತ್ತೆಯಾಗಿದ್ದಾರೆ......
ವ್ಯಾಪಂ ಹಗರಣ: 8ನೇ ಆರೋಪಿಯ ನಿಗೂಢ ಸಾವು

ಭೋಪಾಲ್: ವ್ಯಾಪಂ ಹಗರಣದ 8ನೇ ಆರೋಪಿ ವಿಜಯ್ ಸಿಂಗ್ ಶವವಾಗಿ ಪತ್ತೆಯಾಗಿದ್ದಾರೆ. ಛತ್ತೀಸ್ ಗಡದ ಕಾಂಕೇರ್ ಜಿಲ್ಲೆಯ ಲಾಡ್ಜ್ ವೊಂದರಲ್ಲಿ ವಿಜಯ್ ಸಿಂಗ್ ಶವ ಪತ್ತೆಯಾಗಿದೆ.  ಪ್ರಕರಣದ ಪ್ರಮುಖ ಆರೋಪಿ ವಿಜಯ್ ಸಿಂಗ್ ಫಾರ್ಮಾಸಿಸ್ಟ್ ಆಗಿದ್ದ. ಹಲವು ರಾಜಕೀಯ ನಾಯಕರುಗಳೊಂದಿಗೆ ಒಡನಾಟ ಇಟ್ಟುಕೊಂಡಿದ್ದ.
ಶವವನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ. ವಿಜಯ್ ಸಿಂಗ್ ಕತ್ತು ಹಾಗೂ ಮೊಣಕೈ ಮೇಲೆ ಗಾಯದ ಗುರುತುಗಳಿದ್ದು ಇದೊಂದು ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಮಗ ಶೈಲೇಶ್ ಕೂಡ ನಿಗೂಢವಾಗಿ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ವ್ಯಾಪಂ ಹಗರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮದ್ಯಪ್ರದೇಶ ವೃತ್ತಿಪರ ಶಿಕ್ಷಣ ಇಲಾಖೆಯ ಪರೀಕ್ಷಾ ಮಂಡಳಿಯಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ಬಹಿರಂಗವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com