ಕಣಿವೆಗೆ ಉರುಳಿದ ಬಸ್: ಕನಿಷ್ಟ 15 ಸಾವು, 20ಕ್ಕೂ ಹೆಚ್ಚು ಮಂದಿ ಗಂಭೀರ

ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ.
ಉಧಮ್ ಪುರ್ (ಸಂಗ್ರಹ ಚಿತ್ರ)
ಉಧಮ್ ಪುರ್ (ಸಂಗ್ರಹ ಚಿತ್ರ)
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ.

ಪ್ರಯಾಣಿಕರ ಬಸ್ ಲತ್ತಿ ಬೆಲ್ಟ್ ನಿಂದ ಉಧಮ್ ಪುರಕ್ಕೆತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೆ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕವಾಗಿ ಜಿಎಂಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಗಾಯಾಳುಗಳ ರಕ್ಷಣೆಗಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ಕೂಡ ಬಳಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com