ಜಯಾ ಮತ್ತೆ ತಮಿಳುನಾಡು ಸಿಎಂ, ಮೇ 17ಕ್ಕೆ ಪ್ರಮಾಣವಚನ?

ಕಾನೂನು ಹೋರಾಟದಲ್ಲಿ ಹಾಗೂ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ....
ಜಯಲಲಿತಾ
ಜಯಲಲಿತಾ

ಚೆನ್ನೈ: ಕಾನೂನು ಹೋರಾಟದಲ್ಲಿ ಹಾಗೂ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಜಯಲಲಿತಾ ಅವರು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ತಕ್ಷಣದಿಂದಲೇ ಅವರು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬಹುದು. ಆದರೆ ಮೂಲಗಳ ಪ್ರಕಾರ ಮೇ 17ಕ್ಕೆ ಜಯಲಲಿತಾ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ತೀರ್ಪು ಪ್ರಕಟವಾಗುತ್ತಿದ್ದಂತೆ ತಮಿಳುನಾಡು ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಸೇರಿದಂತೆ ಇಡೀ ಸಚಿವ ಸಂಪುಟವೇ ಚೆನ್ನೈನಲ್ಲಿರುವ ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಆಗಮಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ಸೇರಿ ಇತರೆ ಮೂವರು ಆರೋಪಿಗಳು ನಿರ್ದೋಷಿ ಎಂದು ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com