ತಿಹಾರ್ ಜೈಲಿನಲ್ಲಿ ಇಬ್ಬರು ಕೈದಿಗಳ ನಿಗೂಢ ಸಾವು

ಹೆಚ್ಚಿನ ಭದ್ರತೆ ಹೊಂದಿರುವ ತಿಹಾರ್ ಜೈಲಿನಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ...
ತಿಹಾರ್ ಜೈಲು
ತಿಹಾರ್ ಜೈಲು

ನವದೆಹಲಿ: ಹೆಚ್ಚಿನ ಭದ್ರತೆ ಹೊಂದಿರುವ ತಿಹಾರ್ ಜೈಲಿನಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕೊಲೆ ಪ್ರಕರಣ ವಿಚಾರಣೆ ಎದುರಿಸುತ್ತಿದ್ದ ರಿತೇಶ್ ಮಿತ್ತಲ್ ಅಲಿಯಾಸ್ ಶಾಲು(32) ಮತ್ತು ಅಮಿತ್ ಅಲಿಯಾಸ್ ಪಂಡ(26) ಎಂದು ಗುರುತಿಸಲಾಗಿದೆ. ಈ ಇಬ್ಬರು ಕೈದಿಗಳು ಮಾಧಕ ದ್ರವ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಜೈಲು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ರಿತೇಶ್ ಮಿತ್ತಲ್ ಕೊಲೆ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಗಳಿದ್ದು, 11 ವರ್ಷ ಜೈಲಿನಲ್ಲಿ ಕಳೆಯಬೇಕಿತ್ತು. ಮತ್ತೊಬ್ಬ ಕೈದಿ ಅಮಿತ್ ಕೊಲೆ ಯತ್ನ ಆರೋಪದ ಮೇಲೆ ವಿಚಾರಣಾಧೀನ ಕೈದಿಯಾಗಿದ್ದು, ಈ ಇಬ್ಬರನ್ನು ಜೈಲಿನ ಕೊಠಡಿ ಸಂಖ್ಯೆ 8-9ರಲ್ಲಿ ಇಡಲಾಗಿತ್ತು.

ಕೈದಿಗಳ ಪ್ರಕಾರ, ಇಬ್ಬರೂ ಕಳೆದ ರಾತ್ರಿ ಮಾಧಕ ಔಷಧಿಗಳನ್ನು ಸೇವಿಸಿದ್ದರು ಎಂದು ತಿಳಿಸಿದ್ದಾರೆ. ಈ ಇಬ್ಬರ ಸಾವಿನ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com