ಅತ್ಯಾಚಾರ ಸಂತ್ರಸ್ತೆ ನರ್ಸ್ ಅರುಣಾ ಶಾನಭಾಗ್ ಸ್ಥಿತಿ ಗಂಭೀರ, ವೆಂಟಿಲೆಟರ್ ಅವಳಡಿಕೆ

ಕಳೆದ 42 ವರ್ಷಗಳಿಂದ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿರುವ ಅರುಣಾ ರಾಮಚಂದ್ರ ಶಾನಭಾಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು...
ಅರುಣಾ ಶಾನಭಾಗ್
ಅರುಣಾ ಶಾನಭಾಗ್
Updated on

ಮುಂಬೈ: ಕಳೆದ 42 ವರ್ಷಗಳಿಂದ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿರುವ ಅರುಣಾ ರಾಮಚಂದ್ರ ಶಾನಭಾಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೆಟರ್ ಅಳವಡಿಸಲಾಗಿದೆ.

ಅತ್ಯಾಚಾರಕ್ಕೊಳಗಾಗಿ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಕೋಣೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರುಣಾ ಶಾನಭಾಗ(68) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ತೀವ್ರ ನಿಗಾ ಘಟಕಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮುಂಬೈನಲ್ಲಿ ನರ್ಸ್ ಆಗಿದ್ದ ಅರುಣಾ ಶಾನಭಾಗ್ ಅವರನ್ನು ಅದೇ ಆಸ್ಪತ್ರೆಯ ವಾರ್ಡ್ ಬಾಯ್ ಆಗಿದ್ದ ಸೋಹನ್ ಲಾಲ್ ಭಟ್ರಾ ವಾಲ್ಮಿಕಿ ಎಂಬಾತ ಆಕೆಯನ್ನು 1973ರಲ್ಲಿ ಭೀಕರವಾಗಿ ಅತ್ಯಾಚಾರಿಸಿದ್ದ ಈ ಘಟನೆಯ ಬಳಿಕ ಅರುಣಾ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಸತತ 42 ವರ್ಷಗಳಿಂದ ಜೀವಚ್ಛವವಾಗಿ ಹಾಸಿಗೆಯಲ್ಲಿ ಮಲಗಿದ್ದಾರೆ. ಈ ದುಷ್ಕೃತ್ಯಕ್ಕೆ ಕಾರಣನಾದ ವಾಲ್ಮಿಕಿಯನ್ನು ಅದೇ ಆಸ್ಪತ್ರೆಯಲ್ಲಿ ನಾಯಿ ಚೈನಿನಿಂದ ನಿಯಂತ್ರಿಸಲಾಗಿದೆ.

ಜೀವಚ್ಛವವಾಗಿ ಮಲಗಿರುವ ಅರುಣಾ ಶಾನಭಾಗ್ ಅವರಿಗೆ ದಯಾಮರಣ ಕರುಣಿಸಬೇಕು ಎಂದು ಪತ್ರಕರ್ತೆ ಪಿಂಕಿ ವಿನಾನಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ 2011ರಲ್ಲಿ ಸುಪ್ರೀಂಕೋರ್ಟ್ ದಯಾಮರಣ ಅರ್ಜಿಯನ್ನು ತಿರಸ್ಕರಿಸಿತ್ತು. ಅರುಣಾರಿಗೆ ದಯಾಮರಣ ಸಾಧ್ಯವಿಲ್ಲ ಎಂದು ತೀರ್ಪು ನೀಡಿತ್ತು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com