ಹೊಂಡಾ ಸಿಟಿ ಕಾರು
ಹೊಂಡಾ ಸಿಟಿ ಕಾರು

ಬಸ್‍ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಹೊಂಡಾ ಸಿಟಿ: ಇಬ್ಬರ ಸಾವು, 6 ಮಂದಿಗೆ ಗಾಯ

ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್‌ ಬಸ್‌ ನಿಲ್ದಾಣದ ಬಳಿ ನಡೆದಿದೆ...

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್‌ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಎನ್ನಾಗರ ಗೇಟ್ ಬಸ್ ನಿಲ್ದಾಣದಲ್ಲಿ 8 ರಿಂದ 10 ಮಂದಿ ಬಸ್ಸಿಗಾಗಿ ಕಾಯುತ್ತಿದ್ದವರು. ಈ ವೇಳೆ ವೇಗವಾಗಿ ಬಂದ ಹೊಂಡಾ ಸಿಟಿ ಕಾರು ಏಕಾಏಕಿ ಜನರ ಮೇಲೆ ಹರಿಯಿತು. ಘಟನೆಯಲ್ಲಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸೂರು ಕಡೆಯಿಂದ ವೇಗವಾಗಿ ಬಂದ ಹೊಂಡಾ ಸಿಟಿ ಕಾರು ಇವರ ಮೇಲೆ ಹರಿದಿದೆ. ಈ ಸಂಬಂಧ ಚಾಲಕ ಕಾರ್ತಿಕ್‍ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದು, ಆತ ಕುಡಿದು ಕಾರು ಚಾಲನೆ ಮಾಡುತ್ತಿದ್ದ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com