ಲಖನೌ : ಒಡಿಶಾದ ಭುವನೇಶ್ವರದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಉತ್ತರ ಪ್ರದೇಶದ ಲಖನೌನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ.
169 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನದ ಕಿಟಕಿಯ ಗಾಜು ಒಡೆದದ್ದು ಗಮನಕ್ಕೆ ಬಂದ ತಕ್ಷಣ ಪೈಲಟ್ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ.
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ಪ್ರಯಾಣ ಮುಂದುವರಿಸಲು ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.
Advertisement