ಉತ್ತರ ಭಾರತದಲ್ಲಿ ಬಿರುಗಾಳಿ: ರಾಜಸ್ಥಾನದಲ್ಲಿ 7 ಮಂದಿ ಬಲಿ

ಉತ್ತರ ಭಾರತದಲ್ಲಿ ಮಂಗಳವಾರ ಬಿರುಗಾಳಿ ಸೃಷ್ಟಿಸಿದ್ದ ಅನಾಹುತಕ್ಕೆ ಹಲವು ಮನೆಗಳು ನಾಶವಾಗಿದ್ದು, ರಾಜಸ್ಥಾನದಲ್ಲಿ 7 ಮಂದಿ ಬಲಿಯಾಗಿದ್ದಾರೆ...
ಜೈಪುರದಲ್ಲಿ ಬಿರುಗಾಳಿಯಿಂದಾಗಿ ಧರೆಗುರುಳಿದ ಮರವನ್ನು ಪಕ್ಕಕ್ಕೆ ಸರಿಸಲು ಯತ್ನಿಸುತ್ತಿರುವ ಸಾರ್ವಜನಿಕರು.
ಜೈಪುರದಲ್ಲಿ ಬಿರುಗಾಳಿಯಿಂದಾಗಿ ಧರೆಗುರುಳಿದ ಮರವನ್ನು ಪಕ್ಕಕ್ಕೆ ಸರಿಸಲು ಯತ್ನಿಸುತ್ತಿರುವ ಸಾರ್ವಜನಿಕರು.
Updated on

ನವದೆಹಲಿ: ಉತ್ತರ ಭಾರತದಲ್ಲಿ ಮಂಗಳವಾರ ಬಿರುಗಾಳಿ ಸೃಷ್ಟಿಸಿದ್ದ ಅನಾಹುತಕ್ಕೆ ಹಲವು ಮನೆಗಳು ನಾಶವಾಗಿದ್ದು, ರಾಜಸ್ಥಾನದಲ್ಲಿ 7 ಮಂದಿ ಬಲಿಯಾಗಿದ್ದಾರೆ.

ಬೇಸಿಗೆಯಿಂದ ನಲುಗಿದ್ದ ಉತ್ತರ ಭಾರತದ ಹಲವೆಡೆ ನಿನ್ನೆ ಮಳೆ ಆರಂಭವಾಗಿತ್ತು. ಈ ವೇಳೆ ಗಾಳಿ ಹೆಚ್ಚಾಗಿದೆ. ನಂತರ 4.15 ಸಂಜೆ ಸುಮಾರಿಗೆ ಬಂದ ಬಿರುಗಾಳಿ ಅಲ್ಲಿನ ಜನತೆಯನ್ನು ಭಯಭೀತ ಗೊಳಿಗೊಳಿಸಿದ್ದು, ಹಲವೆಡೆ ಮನೆಗಳ ಮೇಲ್ಛಾವಣಿಗಳು ಧರೆಗುಳುವಂತೆ ಮಾಡಿದೆ. ಅಲ್ಲದೆ ಗಾಳಿಯ ತೀವ್ರತೆ ಹೆಚ್ಚಾದ ಕಾರಣ ರಸ್ತೆಗಳೆಲ್ಲ ಧೂಳುಮಯವಾಗಿದೆ. ಇದರಿಂದಾಗಿ ರಾಜಸ್ಥಾನದಲ್ಲಿ 7ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ರಾಜಸ್ತಾನ ಒಂದರಲ್ಲೇ 5 ಮಂದಿ ಸಾವನ್ನಪ್ಪಿದ್ದು, ಭರತ್ಪುರ ಹಾಗೂ ಬಿಕನರ್ ನಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಿರುಗಾಳಿಯಿಂದ ಅಲ್ಲಿನ ಮನೆಗಳು ನಾಶಗೊಂಡಿದ್ದು, ಹಲವೆಡೆ ರಸ್ತೆಗಳಲ್ಲಿ ಮರಗಳು ಧರೆಗುರುಳಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com