ಭಯೋತ್ಪಾದನೆಯನ್ನು ಮಟ್ಟ ಹಾಕಲು ಪಾಕಿಸ್ತಾನ ಬೆಂಬಲ ನೀಡಬೇಕು: ರಾಜನಾಥ್ ಸಿಂಗ್

ಭಯೋತ್ಪಾದಕತೆಯನ್ನು ಮಟ್ಟ ಹಾಕಲು ಭಾರತ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.....
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಭಯೋತ್ಪಾದಕತೆಯನ್ನು ಮಟ್ಟ ಹಾಕಲು ಭಾರತ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದಕ್ಕೆ ಪಾಕಿಸ್ತಾನ ಸೂಕ್ತ ಬೆಂಬಲ ನೀಡಬೇಕು. ಇಲ್ಲವಾದಲ್ಲಿ ಪಾಕ್ ಕೂಡ ಮುಂದಿನ ದಿನಗಳಲ್ಲಿ ಇದೇ ರೀತಿಯ ಸಮಸ್ಯೆಯನ್ನು ಎದುರಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಭಯೋತ್ಪಾದಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಬಲ ನೀಡುವಂತೆ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮನವಿ ಮಾಡಿದೆ.  ಭಯೋತ್ಪಾದಕತೆ ನಿಗ್ರಹಿಸಲು ಭಾರತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದರು.
ಭಯೋತ್ಪಾದಕರನ್ನು ಯಾರು ಪೋಷಿಸುತ್ತಿದ್ದಾರೆ, ಅದರ ಹೊಣೆಗಾರಿಕೆ ಯಾರದ್ದೂ ಎಂಬು ಸತ್ಯ ಇಡೀ ಜಗತ್ತಿಗೆ ತಿಳಿದಿದೆ ಎಂದು ರಾಜನಾಥ್ ಸಿಂಗ್ ಪರೋಕ್ಷವಾಗಿ ಪಾಕಿಸ್ತಾನ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ.
ಇತ್ತೀಚೆಗೆ ಪಾಕ್ ನಲ್ಲಿ ನಡೆದ ಭಯೋತ್ಪಾಕರ ದಾಳಿಗಳನ್ನು ಸ್ಮರಿಸಿದ ರಾಜನಾಥ್ ಸಿಂಗ್  ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಅಗತ್ಯವಾದ ಬೆಂಬಲ ನೀಡಲೇಬೇಕು.ನಮ್ಮಂತೆಯೇ ಪಾಕ್ ಕೂಡ ಉಗ್ರರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com