ಭೂ ಸ್ವಾಧೀನ ಸುಗ್ರೀವಾಜ್ಞೆ ವಿಷಯ ನನಗೆ ಸಾವು ಬದುಕಿನ ವಿಚಾರವಲ್ಲ: ಮೋದಿ

ಭೂ ಸ್ವಾಧೀನ ಸುಗ್ರೀವಾಜ್ಞೆ ವಿಚಾರ ನನಗೆ ಸಾವು ಬದುಕಿನ ವಿಷಯವೇನಲ್ಲ ಮತ್ತು ಈ ಕುರಿತಂತೆ ಯಾವುದೇ ನಿರ್ಧಾರ ಹೊರಬಂದರೂ ಅದನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Updated on

ನವದೆಹಲಿ: ಭೂ ಸ್ವಾಧೀನ ಸುಗ್ರೀವಾಜ್ಞೆ ವಿಷಯ ನನಗೆ ಸಾವು ಬದುಕಿನ ವಿಚಾರವೇನಲ್ಲ ಮತ್ತು ಈ ಕುರಿತಂತೆ ಯಾವುದೇ ನಿರ್ಧಾರ ಹೊರಬಂದರೂ ಅದನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಮೂರನೇ ಬಾರಿಗೆ ಮಂಡನೆ ಮಾಡಲು ಶಿಫಾರಸು ಮಾಡಿತ್ತು. ಈ ಕುರಿತಂತೆ ಖಾಸಗಿ ಪತ್ರಿಕೆಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ಅವರು, ಭೂ ಸ್ವಾಧೀನ ಸುಗ್ರೀವಾಜ್ಞೆ ವಿಚಾರ ನನ್ನ ಪಕ್ಷ ಹಾಗೂ ಸರ್ಕಾರದ ಕಾರ್ಯಸೂಚಿಯಾಗಿದ್ದು, ಈ ವಿಚಾರ ನನಗೆ ಸಾವು ಬದುಕಿನ ವಿಚಾರವೇನಲ್ಲ ಎಂದು ಹೇಳಿದ್ದಾರೆ.

ಎನ್ ಡಿಎ ಸರ್ಕಾರ 2014 ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಭೂ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಈ ಮಸೂದೆಗೆ ಬಹುಮತ ಸಿಗದ ಕಾರಣ ಮತ್ತೆ ಈ ವರ್ಷದ ಮಾರ್ಚ್ ತಿಂಗಳಿನಲ್ಲಿ 2ನೇ ಬಾರಿಗೆ ಮಸೂದೆ ಮಂಡಿಸಿತ್ತು. ಈ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮೇಲ್ಮನೆಯಲ್ಲಿ ಒಪ್ಪಿಗೆ ದೊರೆತಿರಲಿಲ್ಲ. ಈ ಕಾರಣದಿಂದ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಇದೀಗ ಸುಗ್ರೀವಾಜ್ಞೆಯ ಅವಧಿಯು ಇದೇ ಜೂನ್ 4ಕ್ಕೆ ಮುಕ್ತಾವಾಗಲಿದ್ದು, ಎನ್ ಡಿಎ ಸರ್ಕಾರದ ವಿವಾದಿತ ಭೂ ಸ್ವಾಧೀನ ಕಾಯ್ದೆ ಕುರಿತಂತೆ ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com