ಕೈ, ಕಮಲ ದಲಿತ ರಾಜಕೀಯ

ಮಹತ್ವದ ಬಿಹಾರ ಹಾಗೂ ಉತ್ತರ ಭಾರತ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ದಲಿತ ರಾಜಕೀಯ ಮಾಡಲು ಹೊರಟಿವೆ...
ಡಾ.ಬಿ.ಆರ್.ಅಂಬೇಡ್ಕರ್ 125ನೇ ಜನ್ಮದಿನಾಚರಣೆ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ, ಮಾಡಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ
ಡಾ.ಬಿ.ಆರ್.ಅಂಬೇಡ್ಕರ್ 125ನೇ ಜನ್ಮದಿನಾಚರಣೆ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ, ಮಾಡಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ
Updated on

ನವದೆಹಲಿ: ಮಹತ್ವದ ಬಿಹಾರ ಹಾಗೂ ಉತ್ತರ ಭಾರತ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ದಲಿತ ರಾಜಕೀಯ ಮಾಡಲು ಹೊರಟಿವೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದರೆ, ಸಂವಿಧಾನ ಶಿಲ್ಪಿ ಹುಟ್ಟುಹಬ್ಬದ ನೆನಪಲ್ಲಿ ವರ್ಷವಿಡೀ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲು ಕಾಂಗ್ರೆಸ್ ಹೊರಟಿದೆ.

ಸಚಿವ ಸಂಪುಟಸಭೆಯಲ್ಲಿ ತೀರ್ಮಾನ:
ಈಗಾಗಲೇ ಗಾಂಧೀಜಿ, ನೆಹರೂ, ಪಿ.ವಿ.ನರಸಿಂಹರಾವ್ ಮತ್ತಿತರ ನಾಯಕರನ್ನು ಕಾಂಗ್ರೆಸ್ ಕೈಯಿಂದ ಹೈಜಾಕ್ ಮಾಡಿರುವ ಬಿಜೆಪಿ ಈಗ, ಪ್ರತಿಪಕ್ಷಕ್ಕೆ ಡಾ. ಅಂಬೇಡ್ಕರ್ ಮೂಲಕ ಮತ್ತೊಂದು ಟಾಂಗ್ ನೀಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ಅಂಬೇಡ್ಕರ್ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಿದೆ. ಇದಕ್ಕಾಗಿ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶ, ಕಚೇರಿ ಹಾಗೂ ಸಚಿವಾಲಯಗಳು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಸಲಹೆ ನೀಡಿದೆ.

ಅಂಬೇಡ್ಕರ್ ಚಿಂತನೆ, ಆದರ್ಶಗಳನ್ನು ಪಸರಿಸಲು 16 ಪ್ರಮುಖ ಕಾರ್ಯಗಳನ್ನು ಪಟ್ಟಿ ಮಾಡಿದ್ದು, 197 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ನಿರ್ಮಿಸುವ ನಿರ್ಧಾರವನ್ನೂ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಯಿತು. ಅವರ ಜನ್ಮದಿನವನ್ನು ರಾಷ್ಟ್ರೀಯ ಸ್ನೇಹ ಮತ್ತು ಭ್ರಾತೃತ್ವದ ದಿನವನ್ನಾಗಿ ಆಚರಿಸುವ ಕುರಿತೂ ಪ್ರಸ್ತಾವನೆಯಾಗಿದೆ. ಅಂದು ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ನಿರ್ಮಿಸುವ ನಿರ್ಧಾರವನ್ನೂ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಯಿತು. ಅವರ ಜನ್ಮ ದಿನವನ್ನು ರಾಷ್ಟ್ರೀಯ ಸ್ನೇಹ ಮತ್ತು ರ್ಬಾತೃತ್ವದ ದಿನವನ್ನಾಗಿ ಆಚರಿಸುವ ಕುರಿತೂ ಪ್ರಸ್ತಾವನೆಯಾಗಿದೆ.

ಅಂದು ಅಂಬೇಡ್ಕರ್ ಅಂಚೆ ಚೀಚಿ ಹಾಗೂ ನಾಣ್ಯ ಕೂಡ ಹೊರಬರಲಿದೆ. ದೆಹಲಿಯ ಅಲಿಪುರ್ ನಲ್ಲಿ ರು. 99 ಕೋಟಿ ವೆಚ್ಚದ ಅಂಬೇಡ್ಕರ್ ಸ್ಮಾರಕದ ನಿರ್ಮಾಣಕ್ಕೂ ಚಾಲನೆ ಸಿಗಲಿದೆ. ಅಂಬೇಡ್ಕರ್ ಓದಿದ್ದ ಕೊಲಂಬಿಯಾ ವಿವಿಗೆ ಪ್ರತಿವರ್ಷ ನೂರು ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕೆ ಕಳುಹಿಸಿಕೊಡುವ ಕುರಿತೂ ನಿರ್ಧರಿಸಲಾಗಿದೆ.

ರಾಹುಲ್ ಚಾಲನೆ:
ಉತ್ತರ ಭಾರದಲ್ಲಿ ದಲಿತರು ಕಾಂಗ್ರೆಸ್ ನಿಂದ ದೂರ ಸರಿದಿರುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಹುಟ್ಟೂರಿನಲ್ಲಿ ಜನ್ಮದಿನ ಕಾರ್ಯಕ್ರಮಕ್ಕೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com