ನವದೆಹಲಿ: ದೆಹಲಿ ಗ್ಯಾಂಗ್ರೇಪ್ನಲ್ಲಿ ಭಾಗಿಯಾಗಿರುವ ಬಾಲಾರೋಪಿ ಮುಂದಿನ ತಿಂಗಳು ಜೈಲಿಂದ ಬಿಡುಗಡೆಯಾಗಲಿದ್ದಾನೆ. ಅದಕ್ಕೆ ಪೂರಕವಾಗಿ ಸೋಮವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ``ನಿರ್ಭಯಾಗೆ ಸೂಕ್ತ ನ್ಯಾಯ ಒದಗಿಸಿಕೊಟ್ಟಂತೆ ಆಗಲಿಲ್ಲ.
ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಾಲಾರೋಪಿ ಮೇಲೆ ಹೆಚ್ಚಿನ ನಿಗಾ ಇರಿಸಬೇಕು. ಆತ ಮತ್ತೊಂದು ಹೀನ ಕೃತ್ಯ ಎಸಗುವ ವರೆಗೆ ಕಾಯುವಂತಾಗಬಾರದು. ಈ ಬಗ್ಗೆ ಸಂಬಂಧಿತ ಅಧಿಕಾರಿಗಳ ಜತೆ ಚರ್ಚಿಸುತ್ತೇನೆ'' ಎಂದಿದ್ದಾರೆ. ಅತ್ಯಾಚಾರ ಮತ್ತು ಕೊಲೆಯಂಥ ಹೀನ ಕೃತ್ಯ ಎಸಗಿದರೂ ಆತನಿಗೆ ಕಠಿಣ ಶಿಕ್ಷೆ ವಿಧಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗು ತಮಗೆ ಇದೆ ಎಂದೂ ಹೇಳಿದ್ದಾರೆ.
ಇದೇ ವೇಳೆ ಮನೇಕಾ ಹೇಳಿಕೆಗೆ ಬಾಲಾರೋಪಿ ಹೆತ್ತವರು ಆಕ್ಷೇಪಿಸಿದ್ದಾರೆ. ಜೈಲಿಗೆ ಹೋದ ಬಳಿಕ ಆತನಲ್ಲಿ ಸುಧಾರಣೆಯಾಗಿದೆಯೇ, ದೇಶದಲ್ಲಿ ಸಾವಿರಾರು ಹೆಣ್ಣುಮಕ್ಕಳ ಅತ್ಯಾಚಾರ ನಡೆಯುತ್ತಿದೆ. ಏನಾದರೂ ಪರಿಸ್ಥಿತಿ ಸುಧಾರಣೆಯಾಗಿದೆಯೇ''ಎಂದು ಬಾಲಾರೋಪಿಯ ತಾಯಿ ಪ್ರಶ್ನಿಸಿದ್ದಾರೆ.
Advertisement