ಶಾರದ ಚಿಟ್ ಫಂಡ್ ಹಗರಣ: ಮದನ್ ಮಿತ್ರಾ ಆಸ್ಪತ್ರೆಗೆ ದಾಖಲು

ಶಾರದ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಸಚಿವಾರಗಿದ್ದ ಮದನ್ ಮಿತ್ರಾ ಅನಾರೋಗ್ಯದ...
ಮದನ್ ಮಿತ್ರಾ
ಮದನ್ ಮಿತ್ರಾ
Updated on
ಕೊಲ್ಕತಾ: ಶಾರದ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಸಚಿವಾರಗಿದ್ದ ಮದನ್ ಮಿತ್ರಾ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮದನ್ ಮಿತ್ರಾ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಹೈಕೋರ್ಟ್ ಮೊರೆ ಹೋಗುತ್ತಿದ್ದಂತೆ ಇತ್ತ ಮದನ್ ಮಿತ್ರಾ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮದನ್ ಅವರನ್ನು ಭೋವಾನಿಪೋರ್ ಪ್ರದೇಶದಲ್ಲಿರುವ ಅವರ ನಿವಾಸದಿಂದ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವುಂಡ್ ಲ್ಯಾಂಡ್ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30ಕ್ಕೆ ಮದನ್ ಮಿತ್ರಾ ಅವರು ದಾಖಲಾಗಿದ್ದಾರೆ. 
ಅಲಿಪೋರ್ ಕೋರ್ಟ್ ಮಿತ್ರಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಹಾಗೂ ಮದನ್ ಮಿತ್ರಾ ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಸಿಬಿಐ ಇಂದು ಬೆಳಿಗ್ಗೆ ಹೈಕೋರ್ಟ್ ಮೊರೆ ಹೋಗಿತ್ತು. 
ಶಾರದಾ ಚಿಟ್ ಫಂಡ್ ಹಗರಣದಲ್ಲಿ ಒಳಸಂಚು, ಅಧಿಕಾರ ದುರುಪಯೋಗ, ಹಣ ಹೂಡಿಕೆ ಮುಂತಾದ ಮೇಲ್ನೋಟ ವಿಚಾರಗಳಿಗೆ ಸಂಬಂಧಿಸಿದಂತೆ ಮದನ್ ಮಿತ್ರಾ ಅವರನ್ನು 2014ರ ಡಿಸೆಂಬರ್ ತಿಂಗಳಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com