ಬಿಜೆಪಿ ಕಾರ್ಪೊರೇಟರ್'ಗೆ ಗುಂಡೇಟು: ಸಾವು

ಬಿಜೆಪಿ ಕಾರ್ಪೊರೇಟರ್ ಶಿವಸೇತ್ ಅವರಿಗೆ ದುರ್ಷರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆಯೊಂದು ವಾರಣಾಸಿಯ ತುಳಸಿಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)

ವಾರಣಾಸಿ: ಬಿಜೆಪಿ ಕಾರ್ಪೊರೇಟರ್ ಶಿವಸೇತ್ ಅವರಿಗೆ ದುರ್ಷರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆಯೊಂದು ವಾರಣಾಸಿಯ ತುಳಸಿಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ವಾರಣಾಸಿಯ ರಾಂಪುರದ ಕಾರ್ಪೊರೇಟರ್ ಆಗಿರುವ ಶಿವ ಸೇಥ್ (40) ಅವರು, ನಿನ್ನೆ ರಾತ್ರಿ ಕಕರ್ಮಟ್ಟಾ ಪ್ರದೇಶದಿಂದ ರಾಂಪುರದಲ್ಲಿರುವ ತಮ್ಮ ನಿವಾಸಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದಿರುವ ದುಷ್ಕರ್ಮಿಗಳು ಶಿವ ಸೇಥ್ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆಂದು ಅಧಿಕಾರಿ ಹೇಳಿದ್ದಾರೆ.

ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಶಿವ ಸೇಥ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಅನಾಮಿಕ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿರುವ ಭಾಗಲ್ಪುರ ಪೊಲೀಸರು ತನಿಖೆ ನಡೆಸುತ್ತಿದ್ದು, ಶಿವ ಸೇಥ್ ಅವರ ದೇಹವನ್ನು ಶವ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com