ಯಾರೊಬ್ಬರಿಗೂ ಸಮುದಾಯಗಳ ನಡುವೆ ದ್ವೇಷಮಯ ವಾತಾವರಣ ಸೃಷ್ಟಿಸಲು ಅವಕಾಶ ಕೊಡುವುದಿಲ್ಲ. ಅಂಥ ಬೆಳವಣಿಗೆಗಳು ನಡೆದಲ್ಲಿ ಅಂಥವರ ವಿರುದ್ಧ ಕೇಸು ದಾಖಲಿಸುವುದಾಗಿ ತಿಳಿಸಿದೆ. ಬೆಳವಣಿಗೆ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ಡಾ.ಸ್ವಾಮಿ, ``2006ರಲ್ಲಿ ಅಂದರೆ ಯುಪಿಎ ಸರ್ಕಾರದ ಅವಧಿಯಲ್ಲಿ ತೊಂದರೆ ಕೊಡದೇ ಇದ್ದ ಪುಸ್ತಕ 2015ರಲ್ಲಿ ಹೇಗೆ ತೊಂದರೆ ನೀಡಲು ಸಾಧ್ಯ? ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗಮನಕ್ಕೂ ಬಾರದೆ ಈ ವಿಚಾರ ಕೋರ್ಟ್ಗೆ ಸಲ್ಲಿಕೆಯಾಗಿದೆ. ಅವರ ಜತೆ ಈ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದ ಅಫಿಡವಿಟ್ಗೆ ಪ್ರತಿಯಾಗಿ ಮತ್ತೊಂದು ಪ್ರಮಾಣ ಪತ್ರ ಸಲ್ಲಿಸಲಿದ್ದೇನೆ'' ಎಂದು ತಿಳಿಸಿದ್ದಾರೆ.