ನವದೆಹಲಿ: ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಅಸಹಿಷ್ಣುತೆ ವಿರೋಧಿಸಿ ಸಾಹಿತಿಗಳು, ಚಿತ್ರಿ ನಿರ್ಮಾಪಕರು ತಮ್ಮ ರಾಷ್ಟ್ರ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಪ್ರತಿಭಟನೆಗೆ ಇದೀಗ ಮಾಜಿ ಸೈನಿಕರು ಸಾಥ್ ನೀಡಿದ್ದು, ತಮ್ಮ ಪದಕಗಳನ್ನು ಹಿಂದಿರುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಸಹಿಷ್ಣುತೆ ವಿರೋಧಿಸಿ ದೇಶಾದ್ಯಂತ ಮಾಜಿ ಸೈನಿಕರು ತಮ್ಮ ಪದಕಗಳನ್ನು ಜಿಲ್ಲಾಧಿಕಾರಿಗಳಿಗೆ ವಾಪಸ್ ನೀಡಲಿದ್ದಾರೆ ಎಂದು ನಿವೃತ್ತ ಮೇಜರ್ ಜನರಲ್ ಸತ್ಬಿರ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
'ನಾವು ನಮ್ಮ ಪದಕಗಳನ್ನು ಹಿಂದಿರುಗಿಸುತ್ತೇವೆ ಮತ್ತು ಕಪ್ಪು ದೀಪಾವಳಿ ಆಚರಿಸುವ ಮೂಲಕ ಪ್ರತಿಭಟಿಸುವುದಾಗಿ' ಸಿಂಗ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ವಿರೋಧಿಸಿ ನಿನ್ನೆಯಷ್ಟೇ ಸಾಹಿತಿ ಅರುಂಧತಿ ರಾಯ್ ಹಾಗೂ ಇತರೆ 23 ರಾಷ್ಟ್ರ ಪ್ರಶಸ್ತಿ ವಿಜೇತರು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದರು.
Advertisement