ಪಾಟ್ನ: ಮುಖ್ಯಮಂತ್ರಿಯಾಗಬೇಕೆನ್ನುವ ನನ್ನ ಬಯಕೆಯನ್ನು ಈ ವರೆಗೂ ಎಲ್ಲಿಯೂ ಹೇಳಿಲ್ಲ. ಒಂದು ವೇಳೆ ಮುಖ್ಯಮಂತ್ರಿಯಾಗುವುದಾಗಿ ನನ್ನನ್ನು ಕೇಳಿದ್ದೇ ಆದರೆ, ಖಂಡಿತವಾಗಿಯೂ ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಮಾಜಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ಭಾನುವಾರ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ನನ್ನ ಬಯಕೆಯನ್ನು ಈವರೆಗೂ ಎಲ್ಲಿಯೂ ಹೇಳಿಲ್ಲ. ಆದರೆ, ಜನರು ನಾನು ಮತ್ತೆ ಅವರ ನಾಯಕನಾಗಬೇಕೆಂದು ಕೇಳಿದ್ದೇ ಆದರೆ, ಅದರಿಂದ ನಾನು ಎಂದಿಗೂ ಹಿಂಜರಿಯುವುದಿಲ್ಲ. ನನ್ನ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ಚುನಾವಣಾ ಫಲಿತಾಂಶದಲ್ಲಿ ಮತ್ತೆ ಎನ್ ಡಿಎ ಸರ್ಕಾರ ಗೆಲುವು ಸಾಧಿಸಲಿದ್ದು, ಮಹಾಮೈತ್ರಿ ಪಕ್ಷ ಸೋಲು ಅನುಭವಿಸಲಿದೆ ಎಂದು ಹೇಳಿದ್ದಾರೆ.
Advertisement