ಸಿದ್ದರಾಮಯ್ಯ
ಸಿದ್ದರಾಮಯ್ಯ

ಟಿಪ್ಪು ಜಯಂತಿ ವೇಳೆ ಘರ್ಷಣೆ: ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿರುವುದಕ್ಕೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.
Published on

ನವದೆಹಲಿ: ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿರುವುದಕ್ಕೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.
ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರುದ್ಧ ನಡೆದಿರುವ ಪ್ರತಿಭಟನೆ ಹಾಗೂ ಪ್ರಾಣ ಹಾನಿ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ, ಆದ್ದರಿಂದ ಅವರು ರಾಜೀನಾಮೆ ನೀಡಬೇಕೆಂದು ಸಂಬಿತ್ ಪಾತ್ರ ಹೇಳಿದ್ದಾರೆ. ತೀವ್ರ ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಣೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com