ಸಿಯಾಚಿನ್ ಗ್ಲೇಸಿಯರ್ನ ದಕ್ಷಿಣ ಭಾಗದಲ್ಲಿ ಶುಕ್ರವಾರ ಗಸ್ತು ತಿರುಗುತ್ತಿದ್ದ ಸೈನಿಕ ತುಕುಡಿ ಹಿಮಪಾತದಲ್ಲಿ ಸಿಲುಕಿಕೊಂಡಿತ್ತು. ಸೇನಾಪಡೆಯ ಯೋಧರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಹಿಮಪಾತದಲ್ಲಿ ಸಿಲುಕಿದ್ದ 15 ಯೋಧರನ್ನು ರಕ್ಷಿಸಲಾಗಿದೆ ಎಂದು ಸೇನಾಪಡೆಯ ವಕ್ತಾರ ಕರ್ನಲ್ ಎಸ್.ಡಿ.ಗೋಸ್ವಾಮಿ ತಿಳಿಸಿದ್ದಾರೆ.