ಎಲ್ಇಟಿ ಉಗ್ರರ ವಿರುದ್ಧ ಎನ್‌ಕೌಂಟರ್: ಭಾರತೀಯ ಕರ್ನಲ್ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಲಷ್ಕರ್ ಎ ತೊಯ್ಬಾ ಉಗ್ರರ ವಿರುದ್ಧದ ಎನ್‌ಕೌಂಟರ್ ವೇಳೆ ಭಾರತೀಯ ಕರ್ನಲ್...
ಬಿಎಸ್ಎಫ್
ಬಿಎಸ್ಎಫ್
Updated on
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಲಷ್ಕರ್ ಎ ತೊಯ್ಬಾ ಉಗ್ರರ ವಿರುದ್ಧದ ಎನ್‌ಕೌಂಟರ್ ವೇಳೆ ಭಾರತೀಯ ಕರ್ನಲ್ ಸಂತೋಷ್ ಮಹಾಧಿಕ್ ಹುತಾತ್ಮರಾಗಿದ್ದಾರೆ. 
ನವೆಂಬರ್ 13 ರಿಂದ ಅಡಗಿರುವ 5 ರಿಂದ 8 ಲಷ್ಕರ್ ಎ ತೊಯ್ಬಾ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದರು. ಇಂದು ನಡೆದ ಎನ್‌ಕೌಂಟರ್ ವೇಳೆ 41
41 ಆರ್‌ಆರ್‌ನ ಕಮಾಂಡಿಂಗ್ ಅಧಿಕಾರಿಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕರ್ನಲ್ ಮೃತಪಟ್ಟಿದ್ದಾರೆ. ಇನ್ನು ಮೂವರು ಯೋಧರಿಗೆ ಗಾಯಗಳಾಗಿದ್ದು, ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
5 ರಿಂದ 8 ಮಂದಿ ಉಗ್ರರು ಅಡಗಿರುವ ಮಾಹಿತಿ ಹಿನ್ನೆಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com