ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತಕ್ಕೆ ತಮಿಳುನಾಡು ಅಕ್ಷರಶ: ನಲುಗಿ ಹೋಗಿದೆ. ಚೆನ್ನೈ ಮತ್ತು ಕಾಂಚಿಪುರಂನಲ್ಲಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗಾಗಿ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಈ ಮಧ್ಯೆ ಮೊಬೈಲ್ ಟ್ಯಾಕ್ಸಿ ಸೇವೆ ಪೂರೈಸುವ ಓಲಾ ಪ್ರವಾಹದಲ್ಲಿ ಸಿಲುಕಿರುವವರಿಗಾಗಿ ಓಲಾ ಬೋಟ್ ಸೇವೆ ಆರಂಭಿಸಿದ್ದು, ನಿರಾಶ್ರಿತರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುತ್ತಿದೆ.