ನವದೆಹಲಿ: ಸುಪ್ರೀಂಕೋರ್ಟ್ನ ನಿವೃತ್ತ ನ್ಯಾ. ಕೆ.ಜಿ. ಬಾಲಕೃಷ್ಣನ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಆರೋಪ ಸಂಬಂಧ ಆದಾಯ ತೆರಿಗೆ ಇಲಾಖೆ ಕ್ಲೀನ್ಚಿಟ್ ನೀಡಿದೆ.
ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದ್ದು, ನ್ಯಾ. ಬಾಲಕೃಷ್ಣನ್ ಅವರಿಗೆ ನಿರಾಳ ತಂದಿದೆ. 2007 ರಿಂದ 2010ರ ವರೆಗೆ ಸಿಜೆಐ ಆಗಿದ್ದ ಸಂದರ್ಭದಲ್ಲಿ ಅವರ ಸಂಬಂಧಿಕರು ಅಕ್ರಮವಾಗಿ ಆಸ್ತಿಗಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ ಆದಾಯ ತೆರಿಗೆ ಇಲಾಖೆ, ನ್ಯಾ. ಬಾಲಕೃಷ್ಣನ್ ವಿರುದ್ಧ ಯಾವುದೇ ಸಾಕ್ಷ್ಯಾಧಾರ ದೊರೆತಿಲ್ಲ ಎಂದು ಹೇಳಿದೆ. ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ನ್ಯಾಯಪೀಠಕ್ಕೆ ಈ ಮಾಹಿತಿ ನೀಡಿದ್ದಾರೆ.
ತಾವು ಮುಚ್ಚಿದ ಲಕೋಟೆಯಲ್ಲಿ ಸ್ಥಿತಿಗತಿ ವರದಿ ಸಲ್ಲಿಸುತ್ತೇನೆ. ಆದರೆ ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದಿದ್ದಾರೆ.
Advertisement