ನಿತೀಶ್ ಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಲ್ಲ: ಶತೃಘ್ನ ಸಿನ್ಹಾ

ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಹೇಳಿದ್ದಾರೆ...
ಶತೃಘ್ನ ಸಿನ್ಹಾ
ಶತೃಘ್ನ ಸಿನ್ಹಾ

ಪಾಟ್ನಾ: ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಹೇಳಿದ್ದಾರೆ.

ನವೆಂಬರ್ 20 ರಂದು ನಡೆಯುವ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ತಮಗೆ ಆಹ್ವಾನ ನೀಡಿದ್ದಾರೆ. ಆದರೆ ನನಗೆ ಕೆಲವೊಂದು ಪ್ರಮುಖವಾದ ಕೆಲಸಗಳಿರುವುದರಿಂದ ಕಾರ್ಯಕ್ರಮಕ್ಕೆ ಹೋಗಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿಯಾಗಿ 4ನೇ ಭಾರಿ ಅಧಿಕಾರ ಸ್ವೀಕರಿಸುತ್ತಿದ್ದು, ತಮ್ಮ ಸ್ನೇಹಿತ ನಿತೀಶ್ ಗೆ ಶುಭಾಶಯ ಕೋರಿರುವುದಾಗಿ ಶತೃಘ್ನ ಸಿನ್ಹಾ ತಿಳಿಸಿದ್ದಾರೆ.

ಒಡಿಸ್ಸಾದ ಪೂರಿ ಜಗನ್ನಾಥ ದೇವಾಲಯಕ್ಕೆ ತಮ್ಮ ಪತ್ನಿ ಜೊತೆ ಭೇಟಿ ನೀಡಿದ್ದ ಶತೃಘ್ನ ಸಿನ್ಹಾ, ಬಿಹಾರ ವಿಧಾನ ಸಭೆ ಚುನಾವಣೆ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದರು. ತಮ್ಮ ಪಕ್ಷ ಎಲ್ಲಾ ನ್ಯೂನತೆಗಳನ್ನು ಮೆಟ್ಟಿ ನಿಲ್ಲುವಂತ ಶಕ್ತಿ ನೀಡುವಂತೆ ದೇವರ ಬಳಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com