ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಐವರ ಸಾವು

ಕಾರು-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತೂರಿನಲ್ಲಿ ಸಂಭವಿಸಿದೆ...
ಅಪಘಾತ(ಸಾಂದರ್ಭಿಕ ಚಿತ್ರ)
ಅಪಘಾತ(ಸಾಂದರ್ಭಿಕ ಚಿತ್ರ)
Updated on
ಮೆಟ್ಟಪುರ್ವಪಲ್ಲಿ(ಚಿತ್ತೂರು): ಕಾರು-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ತೂರಿನಲ್ಲಿ ಸಂಭವಿಸಿದೆ. 
ಆಂಧ್ರದ ಚಿತ್ತೂರು ಜಿಲ್ಲೆಯ ಮೆಟ್ಟಪುರ್ವಪಲ್ಲಿ ಗ್ರಾಮದ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಸಾವನ್ನಪ್ಪಿದ್ದಾರೆ. 
ಮೃತರನ್ನು ಕಾರು ಚಾಲಕ ವೇಣುಗೋಪಾಲ್(22), ಸುಮಿತ್ರ(25), ಕಾಳಮ್ಮ, ರಮಣಮ್ಮ ಹಾಗೂ 3 ವರ್ಷದ ಮೇನಕ ಎಂದು ತಿಳಿದುಬಂದಿದೆ.
ಬೈರೆಡ್ಡಿಪಲ್ಲಿಯಲ್ಲಿನ ವಿವಾಹ ಸಮಾರಂಭಕ್ಕೆಂದು ಕಾರಿನಲ್ಲಿ ಐವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com