ಅಸಹಿಷ್ಣುತೆ‌ ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧ: ಶಬಾನಾ ಆಜ್ಮಿ

ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ಬಗ್ಗೆ ಹಿರಿಯ ನಟಿ ಶಬಾನಾ ಆಜ್ಮಿ ತೀವ್ರ ಕಳವಳ ವ್ಯಕ್ತ ಪಡಿಸಿದ್ದಾರೆ....
ಶಬಾನಾ ಆಜ್ಮಿ
ಶಬಾನಾ ಆಜ್ಮಿ

ನವದೆಹಲಿ: ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯ ಬಗ್ಗೆ ಹಿರಿಯ ನಟಿ ಶಬಾನಾ ಆಜ್ಮಿ ತೀವ್ರ ಕಳವಳ ವ್ಯಕ್ತ ಪಡಿಸಿದ್ದಾರೆ.

ಅಸಹಿಷ್ಣುತೆ ಎಂಬುದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾದದ್ದು ಎಂದು ಹೇಳಿರುವ ಅವರು, ಅಸಹಿಷ್ಣುತೆ ತೋರ್ಪಡಿಸುವವರಿಗೆ ಮಾಧ್ಯಮಗಳಲ್ಲಿ ಭಾರೀ ಪ್ರಚಾರ ಸಿಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿದರು.

ಅಸಹಿಷ್ಣುತೆ ಎಂಬುದು ಸಂಸ್ಕೃತಿಯಾಗಿ ಬೆಳೆಯುತ್ತಿರುವುದು ನನಗೆ ನಿಜಕ್ಕೂ ಭಯ ಹುಟ್ಟಿಸುವ ವಿಚಾರವಾಗಿದೆ ಎಂದರು. ಸಮಾಜದಲ್ಲಿ ಜನರು ಇರುವಷ್ಟು ಕಾಲವೂ ಅಸಹಿಷ್ಣುತೆ ಎಂಬುದು ಇದ್ದೇ ಇರುತ್ತದೆ. ಆದರೆ ಅದನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕಾದದ್ದು ಎಲ್ಲರ ಕರ್ತವ್ಯವಾಗಿದೆ ಎಂದು ಶಬಾನಾ ಆಜ್ಮಿ ಅಭಿಪ್ರಾಯ ಪಟ್ಟಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com