ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಹೋಗಿದ್ದರೂ ಸಹ ಅವರು ಬರುತ್ತಿಲ್ಲ. ಇವರ ಬದಲಾಗಿ ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು ಮತ್ತು ರಾಜೀವ್ ಪ್ರತಾಪ್ ರೂಡಿ ಅವರು ಭಾಗವಹಿಸಲಿದ್ದಾರೆ. ಈ ಪ್ರಮಾಣವಚನ ಕಾರ್ಯಕ್ರಮ ಬಿಜೆಪಿಯೇತರ ಪಕ್ಷಗಳ ಸಮಾರಂಭವಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಹೀಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕರ್ನಾಟಕದ ಸಿದ್ದರಾಮಯ್ಯ, ದೆಹಲಿಯ ಅರವಿಂದ್ ಕೇಜ್ರಿವಾಲ್, ಉತ್ತರಪ್ರದೇಶದ ಅಖಿಲೇಶ್ ಯಾದವ್, ಸಿಕ್ಕಿಂನ ಪಿ.ಕೆ. ಚಾಮ್ಲಿಂಗ್, ಹಿಮಾಚಲ ಪ್ರದೇಶದ ವೀರಭದ್ರ ಸಿಂಗ್, ಅಸ್ಸಾಂನ ತರುಣ್ ಗೊಗೊಯ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.