ನಿತೀಶ್‍ ಕುಮಾರ್ ಪದಗ್ರಹಣಕ್ಕೆ ವೇದಿಕೆ ಸಜ್ಜು

ಬಿಹಾರ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಜಯಗಳಿಸಿರುವ ನಿತೀಶ್ ಕುಮಾರ್ ಅವರ ಪದಗ್ರಹಣಕ್ಕೆ ವೇದಿಕೆ ಸಜ್ಜಾಗಿದೆ...
ನಿತೀಶ್ ಕುಮಾರ್
ನಿತೀಶ್ ಕುಮಾರ್
ಪಟನಾ: ಬಿಹಾರ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಜಯಗಳಿಸಿರುವ ನಿತೀಶ್ ಕುಮಾರ್ ಅವರ ಪದಗ್ರಹಣಕ್ಕೆ ವೇದಿಕೆ ಸಜ್ಜಾಗಿದೆ. 
ಇಂದು ಮಧ್ಯಾಹ್ನ 2 ಗಂಟೆಗೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷವೆಂದರೆ ನಿತೀಶ್ ಕುಮಾರ್ ಅವರು, ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಗಾಂಧಿ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. 
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಎನ್ ಸಿಪಿ ಮುಖಂಡ ಶರದ್ ಪವಾರ್, ಎನ್‍ಸಿಯ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಗುಲಾಂ ನಬಿ ಅಜಾದ್ ಉಪಸ್ಥಿತರಿರಲಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಹೋಗಿದ್ದರೂ ಸಹ ಅವರು ಬರುತ್ತಿಲ್ಲ. ಇವರ ಬದಲಾಗಿ ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು ಮತ್ತು ರಾಜೀವ್ ಪ್ರತಾಪ್ ರೂಡಿ ಅವರು ಭಾಗವಹಿಸಲಿದ್ದಾರೆ. ಈ ಪ್ರಮಾಣವಚನ ಕಾರ್ಯಕ್ರಮ ಬಿಜೆಪಿಯೇತರ ಪಕ್ಷಗಳ ಸಮಾರಂಭವಾಗಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಹೀಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕರ್ನಾಟಕದ ಸಿದ್ದರಾಮಯ್ಯ, ದೆಹಲಿಯ ಅರವಿಂದ್ ಕೇಜ್ರಿವಾಲ್, ಉತ್ತರಪ್ರದೇಶದ ಅಖಿಲೇಶ್ ಯಾದವ್, ಸಿಕ್ಕಿಂನ ಪಿ.ಕೆ. ಚಾಮ್ಲಿಂಗ್, ಹಿಮಾಚಲ ಪ್ರದೇಶದ ವೀರಭದ್ರ ಸಿಂಗ್, ಅಸ್ಸಾಂನ ತರುಣ್ ಗೊಗೊಯ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com