ಭಾರತದಲ್ಲಿ ಹೆಚ್ಚಿನ ಹಿಂದೂಗಳು ಗೋ ವ್ಯಾಪಾರಿಗಳು

ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಿಂದೂಗಳೂ ಗೋಮಾರಾಟ ಮಾಡುವ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ...
ರಾಜೇಂದರ್ ಸಾಚಾರ್
ರಾಜೇಂದರ್ ಸಾಚಾರ್
Updated on

ಆಗ್ರಾ: ದೇಶಾದ್ಯಂತ ಗೋಮಾಂಸ ಸೇವನೆ ಬಗ್ಗೆ ಹಲವು ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ, ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ.

ದೇಶದಲ್ಲಿ  ಹೆಚ್ಚಿನ ಸಂಖ್ಯೆಯ ಹಿಂದೂಗಳೂ ಗೋಮಾರಾಟ ಮಾಡುವ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದರ್ ಸಾಚಾರ್ ಹೇಳಿದ್ದಾರೆ.

ಮಥುರಾದ ಆರ್ ಸಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಸ್ಲಿಮರಿಗಿಂತ ಹೆಚ್ಚು ಅಂದರೆ ಶೇ.95 ರಷ್ಟು ಗೋ ವ್ಯಾಪಾರಿಗಳು ಹಿಂದೂಗಳಾಗಿದ್ದಾರೆ ಎಂದರು.

ಈ ಸಮ್ಮೇಳನದಲ್ಲಿ ಕೆನಡಾ, ಆಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳ ವಿದ್ವಾಂಸರು ಪಾಲ್ಗೊಂಡಿದ್ದರು. ಇನ್ನು  ರಾಜೇಂದರ್ ಸಾಚಾರ್ ಈ ಹೇಳಿಕೆ ವಿರೋಧಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವು ಶಿಕ್ಷಕರು ಸಮ್ಮೇಳನದಿಂದ ಹೊರ ನಡೆದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com