ರಾಜೀವ್ ಗಾಂಧಿ, ಇಂದಿರಾಗಾಂಧಿ ಬಗ್ಗೆ ಹೇಳಿಕೆಗೆ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ವಿಷಾದ

ಕಾಂಗ್ರೆಸ್ ಪಕ್ಷದ ತಪ್ಪು ನೀತಿಗಳೇ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆಗೆ ಕಾರಣ ಎಂದಿದ್ದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್
ಥಾವರ್ ಚಂದ್ ಗೆಹ್ಲೋಟ್

ನವದೆಹಲಿ: ಕಾಂಗ್ರೆಸ್ ಪಕ್ಷದ ತಪ್ಪು ನೀತಿಗಳೇ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆಗೆ ಕಾರಣ ಎಂದಿದ್ದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಇಂದಿರಾಗಾಂಧಿ ಹತ್ಯೆ ಬಗ್ಗೆ ನ.26 ರಂದು ಸಂಸತ್ ನಲ್ಲಿ ಹೇಳಿಕೆ ನೀಡಿದ್ದ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಪಕ್ಷ ನೊಟೀಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ ಗೆಹ್ಲೋಟ್ ವಿಷಾದ ವ್ಯಕ್ತಪಡಿಸಿದ್ದಾರೆ.  
ಗೆಹ್ಲೋಟ್ ಗೈರು ಹಾಜರಿಯಲ್ಲಿ ಕಾಂಗ್ರೆಸ್ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು, ರಾಜೀವ್ ಗಾಂಧಿ, ಇಂದಿರಾಗಾಂಧಿ ಹತ್ಯೆಗೆ ಕಾಂಗ್ರೆಸ್ ಪಕ್ಷದ ತಪ್ಪು ನೀತಿಗಳು ಕಾರಣ ಎಂದು ಹೇಳಿರುವುದು ಸರಿಯಲ್ಲ ಎಂದಿದ್ದಾರೆ. ವೆಂಕಯ್ಯ ನಾಯ್ಡು ಅವರ ಹೇಳಿಕೆಗೆ ಸಮಾಧಾನವಾಗದ ಕಾಂಗ್ರೆಸ್ ಸದಸ್ಯರು ಗೆಹ್ಲೋಟ್ ಉಪಸ್ಥಿತಿಗೆ ಒಟ್ಟಾಯಿಸಿದರಲ್ಲದೇ ಸಚಿವರು ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದರು.
ಕಾಂಗ್ರೆಸ್ ಸದಸ್ಯರ ಬೇಡಿಕೆಯನ್ನು ವೆಂಕಯ್ಯ ನಾಯ್ಡು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ಮುಂದಾದರು. ಈ ಬೆಳವಣಿಗೆ ನಂತರ ಸಂಸತ್ ಗೆ ಆಗಮಿಸಿದ ಗೆಹ್ಲೋಟ್ ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com