ಇಂದ್ರಾಣಿ ಮುಖರ್ಜಿಯನ್ನು ಭೇಟಿ ಮಾಡಲು ವಕೀಲರಿಗೆ ಅನುಮತಿ ನಿರಾಕರಣೆ

ಅಧಿಕ ಪ್ರಮಾಣದ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿ ಮಾಡಲು ಆಕೆಯ ಪರ ವಕೀಲರಿಗೆ ಅವಕಾಶ ನಿರಾಕರಿಸಲಾಗಿದೆ.
ಇಂದ್ರಾಣಿ ಮುಖರ್ಜಿ
ಇಂದ್ರಾಣಿ ಮುಖರ್ಜಿ

ಮುಂಬೈ: ಅಧಿಕ ಪ್ರಮಾಣದ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿ ಮಾಡಲು ಆಕೆಯ ಪರ ವಕೀಲರಿಗೆ ಅವಕಾಶ ನಿರಾಕರಿಸಲಾಗಿದೆ.
ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಅವರ ಪರ ವಕೀಲರಾದ ಗುಂಜನ್ ಮಂಗಳಾ ಅವರು ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿ ಮಾಡಲು ಜೆಜೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆದರೆ ಇಂದ್ರಾಣಿ ಮುಖರ್ಜಿ ಅರೆಪ್ರಜ್ಞಾವಸ್ಥೆಯಲ್ಲಿರುವುದರಿಂದ ಅವರನ್ನು ಭೇಟಿ ಮಾಡಲು ವಕೀಲರಿಗೆ ಅನುಮತಿ ನಿರಾಕರಿಸಲಾಗಿದೆ.
ಜೆಜೆ ಆಸ್ಪತ್ರೆಯ ಡೀನ್ ಡಾ.ಟಿಪಿ ಲಹಾನೆ ಅವರನ್ನು ಭೇಟಿ ಮಾಡಿರುವ ಗುಂಜನ್ ಮಂಗಳಾ ಸುಮಾರು 30 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಇನ್ನೂ ಮೂರು ದಿನಗಳ ವರೆಗೆ ಇಂದ್ರಾಣಿ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಡೀನ್ ಡಾ.ಟಿಪಿ ಲಹಾನೆ ಹೇಳಿದ್ದಾರೆ.
ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಪ್ರಮುಖರ್ಜಿ ಪ್ರಮುಖ ಆರೋಪಿಯಾಗಿದ್ದು ಸೆ.11 ರಿಂದ ಮೂರ್ಛೆರೋಗಕ್ಕೆ ಔಷಧಿ ತೆಗೆದುಕೊಳ್ಳುತ್ತಿದ್ದರು ಎಂದು ಪೊಲೀಸರು ಜೆಜೆ ಆಸ್ಪತ್ರೆ ವೈದ್ಯರಿಗೆ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com