ಭಯೋತ್ಪಾದನೆ ಬಗ್ಗೆ ಪಾಕ್ ನಾಯಕರು ಮೌನಕ್ಕೆ ಶರಣಾಗಿದ್ದಾರೆ: ಮಲಾಲಾ

ಪಾಕಿಸ್ತಾನದ ನಾಯಕರು ಭಯೋತ್ಪಾದನೆಯ ಬಗ್ಗೆ ಏಕೆ ಮೌನಕ್ಕೆ ಶರಣಾಗಿದ್ದಾರೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ಝಾಯಿ...
ಮಲಾಲಾ ಯೂಸುಫ್ಝಾಯಿ
ಮಲಾಲಾ ಯೂಸುಫ್ಝಾಯಿ
Updated on

ನವದೆಹಲಿ: ಪಾಕಿಸ್ತಾನದ ನಾಯಕರು ಭಯೋತ್ಪಾದನೆಯ ಬಗ್ಗೆ ಏಕೆ ಮೌನಕ್ಕೆ ಶರಣಾಗಿದ್ದಾರೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ಝಾಯಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಭಾರತದ ಮಕ್ಕಳ ಹಕ್ಕು ಕಾರ್ಯಕರ್ತ ಕೈಲಾಶ್ ಸತ್ಯಾರ್ಥಿಯೊಂದಿಗೆ ನೊಬೆಲ್ ಪ್ರಶಸ್ತಿ ಹಂಚಿಕೊಂಡ ಮಲಾಲಾ, ಮುಂಬರುವ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ. ಮುಂದೆ ನನಗೆ ದೇಶದ ಪ್ರಧಾನಿಯಾಗುವ ಬಯಕೆಯೂ ಇದೆ ಎಂದು ಹೇಳಿದ್ದಾರೆ.

ಮಹಿಳೆಯೊಬ್ಬಳು ಉತ್ತಮ ನಾಯಕಿಯಾಗಲು ಸಾಧ್ಯವಿಲ್ಲ ಎಂದು ಹಲವರು ಅಭಿಪ್ರಾಯ ಪಡುತ್ತಾರೆ. ಆದರೆ, ಭುಟ್ಟೋ ಮಹಿಳೆ ಉತ್ತಮ ನಾಯಕಿಯಾಗಬಲ್ಲಳು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಬೇನಜೀರ್ ಭುಟ್ಟೋ ನನಗೆ ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಭುಟ್ಟೋರಂತೆ ನೀವು ಕೂಡಾ ಪಾಕಿಸ್ತಾನದ ಪ್ರಧಾನಿಯಾಗಲು ಬಯಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಲಾಲಾ, ಒಂದು ವೇಳೆ ಜನತೆ ನನಗೆ ಮತ ಹಾಕಲು ಬಯಸಿದಲ್ಲಿ ಪ್ರಧಾನಿಯಾಗುವೆ. ಆದರೆ, ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎನ್ನುವುದೇ ನನ್ನ ಕನಸು ಎಂದು ತಿಳಿಸಿದ್ದಾರೆ. ಶಿಕ್ಷಣಕ್ಕಾಗಿ ಸ್ವಾತ್ ಕಣಿವೆಯಲ್ಲಿ ಹೋರಾಟ ನಡೆಸುತ್ತಿರುವಾಗ ಉಗ್ರರು ಆಕೆಯ ಮೇಲೆ ಗುಂಡಿನ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com