ನ್ಯೂಯಾರ್ಕ್: ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ವಾರ ಗೋಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಶಂಕಿಸಿ ಉತ್ತರ ಪ್ರದೇಶದ ದಾದ್ರಿಯಲ್ಲಿ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿದ್ದರು. ಈ ಸಂಬಂಧ ಅರುಣ್ ಜೈಟ್ಲಿ ಪ್ರತಿಕ್ರಿಯಿಸಿದ್ದಾರೆ. .
ಭಾರತದಂತಹ ಪ್ರೌಢ ದೇಶದಲ್ಲಿ ಇಂತ ಕೃತ್ಯ ಆತಂಕ ಮೂಡಿಸುತ್ತದೆ. ಇದೊಂದು ದುರಾದೃಷ್ಟಕರ ಘಟನೆಯಾದರೂ ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಅವರು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ತಿಳಿಸಿದರು.
Advertisement