ಜೈಲಿಗೆ ಮರಳಿದ ಇಂದ್ರಾಣಿ ಮುಖರ್ಜಿ, ಮಾತ್ರೆ ತೆಗೆದುಕೊಂಡಿಲ್ಲ ಎಂದ್ರು

ತೀವ್ರ ಅಸ್ವಸ್ಥಗೊಂಡು ಜೆಜೆ ಆಸ್ಪತ್ರೆಗೆ ದಾಖಲಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಮಂಗಳವಾರ ತಡರಾತ್ರಿ ಜೈಲಿಗೆ...
ಇಂದ್ರಾಣಿ ಮುಖರ್ಜಿ
ಇಂದ್ರಾಣಿ ಮುಖರ್ಜಿ

ಮುಂಬೈ: ತೀವ್ರ ಅಸ್ವಸ್ಥಗೊಂಡು ಜೆಜೆ ಆಸ್ಪತ್ರೆಗೆ ದಾಖಲಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಮಂಗಳವಾರ ತಡರಾತ್ರಿ ಜೈಲಿಗೆ ಮರಳಿದ್ದು, ಪೊಲೀಸರು ಆರೋಪಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಬುಧವಾರ ವರದಿ ಮಾಡಲಾಗಿದೆ.

ಮಾಧ್ಯಮ ವರದಿಯ ಪ್ರಕಾರ, ಜೈಲಿನಲ್ಲಿ ಅತಿಯಾದ ಮಾತ್ರೆ ಸೇವಿಸಿದ್ದಾರೆ ಮತ್ತು ಯಾರಾದರೂ ಅವರಿಗೆ ಮಾತ್ರೆಗಳನ್ನು ನೀಡಿರಬಹುದು ಎಂಬ ವರದಿಯನ್ನು ಸ್ಟಾರ್ ಇಂಡಿಯಾ ಮಾಜಿ ಸಿಇಒ ಪೀಟರ್ ಮುಖರ್ಜಿ ಪತ್ನಿ ಇಂದ್ರಾಣಿ ಮುಖರ್ಜಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

'ನಾನು ಯಾವುದೇ ಮಾತ್ರೆ ತೆಗೆದುಕೊಂಡಿಲ್ಲ. ಆದರೆ ನನ್ನ ತಾಯಿಯ ಸಾವಿನಿಂದಾಗಿ ನನ್ನ ಆರೋಗ್ಯ ಹದಗೆಟ್ಟಿತ್ತು' ಎಂದು ಇಂದ್ರಾಣಿ ಹೇಳಿಕೆ ನೀಡಿದ್ದಾರೆ.

ಅಸ್ವಸ್ಥಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಇಂದ್ರಾಣಿ ಮುಖರ್ಜಿಗೆ ಕಳೆದ ಶುಕ್ರವಾರದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮಂಗಳವಾರ ಮತ್ತೆ ಜೈಲಿಗೆ ಸ್ಥಳಾಂತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com