ನವದೆಹಲಿ: ದಾದ್ರಿಯಲ್ಲಿ ಗೋಮಾಂಸ ತಿಂದಿದ್ದಾನೆಂದು ವ್ಯಕ್ತಿಯ ಹತ್ಯೆ, ಕರ್ನಾಟಕದ ಸಾಹಿತಿ ಎಂ ಎಂ ಕಲಬುರ್ಗಿ, ಮಹಾರಾಷ್ಟ್ರದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪಾನ್ಸರೆ ಕೊಲೆಯಂತಹ ಘಟನೆಗಳಿಂದ ನೊಂದು, ಜವಾಹರ್ಲಾಲ್ ನೆಹರೂ ಸೋದರ ಸೊಸೆ, ಲೇಖಕಿ ನಯನತಾರಾ ಸೆಹಗಲ್ ಅವರು, ತಮ್ಮ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸ್ ಮಾಡಿದ್ದಾರೆ.