ನವದೆಹಲಿ: ಮುಂಬೈನಲ್ಲಿ ನಡೆಯಬೇಕಿದ್ದ ಪಾಕಿಸ್ತಾನಿ ಗಾಯಕ ಗುಲಾಂ ಅಲಿ ಅವರ ಪ್ರದರ್ಶನಕ್ಕೆ ಶಿವಸೇನೆ ವಿರೋಧ ವ್ಯಕ್ತಪಡಿಸಿ,ಕಾರ್ಯಕ್ರಮ ರದ್ದುಗೊಳಿಸಿದ್ದು ಗೊತ್ತೇ ಇದೆ. ಪಾಕಿಸ್ತಾನ ಭಾರತ ನಡುವೆ ಗುಂಡಿನ ದಾಳಿ, ಭಯೋತ್ಪಾದನೆ ಇವೆಲ್ಲವನ್ನೂ ಪಾಕ್ ಕೊನೆಗೊಳಿಸುವ ವರಗೆ ರಾಜಕೀಯ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪಾಕ್ನವರಿಗೆ ಅವಕಾಶ ಕೊಡುವುದಿಲ್ಲ ಎಂದು ಶಿವಸೇವೆ ಗುಲಾಂ ಅಲಿ ಅವರ ಸಂಗೀತ ಕಾರ್ಯಕ್ರಮ ರದ್ದು ಮಾಡಿತ್ತು.