ನವದೆಹಲಿ: ಜಾಮೀನು ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಎಂದು ಲೋಕಾಯುಕ್ತ ಹಗರಣದಲ್ಲಿ ನಾಲ್ವರು ಆರೋಪಿಗಳ ಮನವಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈಗಾಗಲೇ ನಿಗದಿ ಮಾಡಿರುವಂತೆ ವಿಚಾರಣೆಯನ್ನು ನ.2ರಂದು ನಡೆಸುವುದಾಗಿ ಮುಖ್ಯ ನ್ಯಾ.ಎಚ್.ಎಲ್.ದತ್ತು ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.
ಬಂಧನಕ್ಕೆ ಒಳಗಾದ ಪಿಆರ್ಒ ಆಗಿದ್ದ ಸಯ್ಯದ್ ರಿಯಾಜ್, ಪತ್ರಕರ್ತ ಶ್ರೀನಿವಾಸಗೌಡ
ಮತ್ತಿಬ್ಬರು ಆರೋಪಿಗಳ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿಗಳನ್ನು ತ್ವರಿತ ವಿಚಾರಣೆ ನಡೆಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಪೂರ್ವ ನಿಗದಿತ ದಿನದಂದೇ ವಿಚಾರಣೆ ನಡೆಯಲಿದೆ ಎಂದು ಹೇಳಿ ಮನವಿ ತಿರಸ್ಕರಿಸಿದರು.
Advertisement